ಕನ್ನಡ ರಾಜ್ಯೋತ್ಸವ ಆಚರಣೆ

ಹಾಸನದ ವಿದ್ಯಾ ಸೌಧ ಪದವಿ ಪೂರ್ವ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 13- 11 -2020 ರ ಶುಕ್ರವಾರದಂದು ಆಚರಿಸಲಾಯಿತು. ಈ ಸುಸಂದರ್ಭದಲ್ಲಿ ವಿದ್ಯಾ ಸೌಧ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಗೋಪಿನಾಥ್ ರವರು ಅಧ್ಯಕ್ಷತೆ ವಹಿಸಿದ್ದು, ಉಪನ್ಯಾಸಕರು ಉಪಸ್ಥಿತರಿದ್ದರು. ಕೋವಿಡ್ -19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿಯೇ ನೃತ್ಯ, ಹಾಡುಗಾರಿಕೆ ಮತ್ತು ಚಿತ್ರಕಲಾ  ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದು, ಅದರ ವಿಡಿಯೋಗಳನ್ನು ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರದರ್ಶಿಸಿದ್ದು,  ಈ ಎಲ್ಲಾ ಚಟುವಟಿಕೆಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ನಂತರ ಅಧ್ಯಕ್ಷರ ಭಾಷಣದೊಂದಿಗೆ ಪ್ರಾಂಶುಪಾಲರು ನಾಡಹಬ್ಬದ ವಿಶೇಷತೆಯನ್ನು ತಿಳಿಸಿದರು. ಕೊನೆಯಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಸಿಹಿ ಹಂಚಿ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.

Vidya soudha group of institutions logo

Admission Enquiry

Thank you!

Vidya soudha group of institutions e-prospectus download

Download the 2026-27 E-Prospectus